ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8,249 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು,159 ಜನ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 2747539 ಜನರಿಗೆ ಸೋಂಕು ತಗುಲಿದ್ದು, 32644 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ
ಇಂದು 14975 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ
ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2511105 ಕ್ಕೆ ಏರಿಕೆಯಾಗಿದೆ. ಇನ್ನು 2747539
ಸಕ್ರಿಯ
ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ ಕೊರೊನಾ ಹರಡುವಿಕೆಯ ಪಾಸಿಟಿವಿಟಿ ದರ 4.86%ಕ್ಕೆ ಇಳಿಕೆಯಾಗಿದೆ. ಇನ್ನು ಮರಣ
ಪ್ರಮಾಣ 1.92% ಕ್ಕೆ ಇಳಿಕೆಯಾಗಿದೆ. ರಾಜ್ಯಾದ್ಯಂತ 169695 ಜನರನ್ನು ಕೊರೊನಾ ಪರೀಕ್ಷೆಗೆ
ಒಳಪಡಿಸಲಾಗಿತ್ತು.
ಬೆಂಗಳೂರು:
ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 1154 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ
ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1192886 ಕ್ಕೆ ಏರಿಕೆಯಾಗಿದೆ. 4769 ಜನ ಸೋಂಕಿನಿಂದ ಸುಧಾರಿಸಿಕೊಂಡು
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1085862
ಕ್ಕೆ
ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 48 ಜನ ಕೊರೊನಾಗೆ ಬಲಿಯಾಗಿದ್ದಾರೆ.
ಈವೆರಗೂ ಒಟ್ಟು 15263 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 91760
ಸಕ್ರಿಯ
ಪ್ರಕರಣಗಳಿವೆ.
ಜಿಲ್ಲಾವಾರು
ಮಾಹಿತಿ.
No comments:
Post a Comment