Skip to main content

ರಾಜ್ಯದಲ್ಲಿಂದು ಭಾರಿ ಇಳಿಕೆ ಕಂಡ ಕೊರೀನಾ, 2576 ಜನರಿಗೆ ಸೋಂಕು,93 ಸಾವು.


ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಭಾರೀ ಇಳಿಮುಖವಾಗಿದೆ.

ಮೊದಲ ಬಾರಿಗೆ ಹೊಸ ಕೇಸ್ 3 ಸಾವಿರಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 2576 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,37,206 ಕ್ಕೆ ಏರಿಕೆಯಾಗಿದೆ.

ಇವತ್ತು 5933 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,04,755 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು 93 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 34,836 ಸೋಂಕಿತರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಯಾಗಿದ್ದು, 97,592 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.92 ಇದೆ.

ರಾಜಧಾನಿ ಬೆಂಗಳೂರಿನಲ್ಲಿ 563 ಜನರಿಗೆ ಸೋಂಕು ತಗುಲಿದೆ. 18 ಸೋಂಕಿತರು ಮೃತಪಟ್ಟಿದ್ದಾರೆ. 1588 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 62,430 ಸಕ್ರಿಯ ಪ್ರಕರಣಗಳಿವೆ.

 


Comments

Popular posts from this blog

ಪ್ರಶ್ನಿಸದೇ ಒಪ್ಪಬೇಡಿ!? ಎಂದ ವಿಚಾರವಾದಿ, ನರಸಿಂಹಯ್ಯನವರ ಜನ್ಮ ದಿನದ ವಿಶೇಷ.

ನವೀನ್ ಪಿ ಆಚಾರ್, ಸಹ ಶಿಕ್ಷಕರು ಮೆದೇಹಳ್ಳಿ.ಇವರಿಂದ,ನರಸಿಂಹಯ್ಯನವರ ಜನ್ಮ ದಿನದ, ಕುರಿತಾಗಿ ವಿಶೇಷ ಲೇಖನ.   ಈ ವಾಕ್ಯವನ್ನು ಎಲ್ಲೋ ಕೇಳಿದ್ದೇವೆ, ಅಂತ ಅನ್ನಿಸಿದರೆ ಅದರ ಕರ್ತೃ ಡಾ.ಎಚ್.ನರಸಿಂಹಯ್ಯ,  ಇವರು  ಯಾವಾಗಲೂ ವೈಜ್ಞಾನಿಕವಾಗಿ ಚಿಂತಿಸುವ ಮೂಲಕ ನಾಡಿಗೆ ಬೆಳಕಾಗಿದ್ದರು. ಅಮೇರಿಕಾದಲ್ಲಿ ಡಾಕ್ಟರೇಟ್‌ ಪಡೆದ ನಂತರವೂ ಹಲವು ವರ್ಷಗಳ ಕಾಲ ಬೆಂಗಳೂರಿನ ನ್ಯಾಷನಲ್‌ ಕಾಲೇಜಿನಲ್ಲಿ ಶಿಕ್ಷಕರಾಗಿದ್ದ ಅವರು , ಎಚ್.ಎನ್‌ ಮೇಷ್ಟ್ರು! ಎಂದೇ ಪ್ರಖ್ಯಾತಿ ಪಡೆದವರು. ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಜೈಲುವಾಸವನ್ನೂ ಅನುಭವಿಸಿದವರು. ಮಹಾತ್ಮ ಗಾಂಧಿಜಿಯವರು ಬೆಂಗಳೂರಿಗೆ ಬಂದಾಗ ಅವರ ಭಾಷಣವನ್ನು ಕನ್ನಡಕ್ಕೆ ತರ್ಜುಮೆ ಮಾಡಿದವರು. ನಾಡಿನ ತುಂಬೆಲ್ಲ ಮೂಢನಂಬಿಕೆಯನ್ನು ವಿರೋಧಿಸುತ್ತಾ ವೈಜ್ಞಾನಿಕ ಚಳುವಳಿಗೆ ನಾಂದಿ ಹಾಡಿದ ಮಹಾಪುರುಷನಿಗೆ ಇಂದು ಜನ್ಮ ದಿನದ ಸಂಭ್ರಮ. " ನಿಂಬೆಹಣ್ಣು ಬೇಡ ಕುಂಬಳಕಾಯಿ ಕೊಡಿ" ಹೀಗೆಂದು ಸಾಯಿ ಬಾಬಾರನ್ನು ಪ್ರಶ್ನಿಸಿದ್ದು ಎಚ್. ನರಸಿಂಹಯ್ಯ ಅವರು. ಇದರ ಹಿನ್ನೆಲೆ ಇಷ್ಟೇ. ಸಾಯಿ ಬಾಬಾ ತನ್ನ ಭಕ್ತರಿಗೆ ಆಶೀರ್ವದಿಸಲು ಚೂಂ ಮಂತ್ರ ಮಾಡಿ ನಿಂಬೆ ಹಣ್ಣು , ಉಂಗುರು , ಚೈನ್ , ಎಚ್.ಎಂ.ಟಿ ವಾಚ್ , ಬೂದಿ... ಹೀಗೆ ಏನೆಲ್ಲಾ ಕೊಡುತ್ತಿದ್ದರು ಎಂಬುದು ಬಾಬಾ ಇದ್ದ ಕಾಲದ ಪ್ರತೀತಿ , ನಂಬಿಕೆ ಮತ್ತು ಅದನ್ನು ಕಂಡವರಿಗೆ ಸತ್ಯ ?! ಹೇಳೀ ಕೇಳೀ ವೈಜ್ಞಾನಿಕ ಮನೋಭಾವದ ಎಚ್.ಎನ್. ಆಯ್ತಪ್ಪಾ ನಿಮ್...

NMMS ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ, ಬೃಹನ್ಮಠ ಪ್ರೌಢಶಾಲೆಗೆ ಕೀರ್ತಿತಂದ ಸಂಜನಾ.

  ಚಿತ್ರದುರ್ಗ : ನಗರದ ಪಶ್ಚಿಮ ಕ್ಲಸ್ಟರ್ ನ ಬೃಹನ್ಮಠ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಂಜನಾ NMMS ಪರೀಕ್ಷೆಯಲ್ಲಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಆಯ್ಕೆ ಆದ ಏಕಮಾತ್ರ ವಿ ದ್ಯಾರ್ಥಿನಿ ಆಗಿರುತ್ತಾಳೆ . 2020ರ ಜೂನ್ ತಿಂಗಳಲ್ಲಿ ನಡೆದ NMMS ಪರೀಕ್ಷೆಯಲ್ಲಿ ಭಾಗವಹಿಸಿದ ಸಂಜನಾ . ಉತ್ತೀರ್ಣಳಾಗಿ, ವಿದ್ಯಾರ್ಥಿ ವೇತನಕ್ಕೆ ಅರ್ಹಳಾದ ಇವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಾಲಾ   ವತಿಯಿಂದ ಅಭಿನಂದಿಸಲಾಯಿತು.   ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ ಸಿದ್ದಪ್ಪ ಅವರು ಅಭಿನಂದಿಸಿ , ಈ ವಿ ದ್ಯಾ ರ್ಥಿಯ ಮುಂದಿನ ವಿದ್ಯಾಭ್ಯಾಸ ಮುಂದುವರಿಸಲು 48000ರೂ ವಿ ದ್ಯಾ ರ್ಥಿ ವೇತನ ಪಡೆದಿರುತ್ತಾಳೆ ಎಂದ ರು. ಅಭಿನಂದನಾ ಕಾರ್ಯಕ್ರಮದಲ್ಲಿ ಪಶ್ಚಿಮ ಕ್ಲಸ್ಟರ್ CRP ಅಜಯ್ ಕುಮಾರ್ , IERT ರಾಜಣ್ಣ , BRP ದೇವರಾಜ್ , ಮುಖ್ಯ ಶಿಕ್ಷಕರಾದ ಆಶಾರಾಣಿ , ತರಳಬಾಳು ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಮನು ಹಾಗೂ ಶಾಲೆಯ ಸಹ ಶಿಕ್ಷಕರು ಅಭಿನಂದಿಸಿದರು. ಬಿ.ಆರ್.ಸಿ. ಈಶ್ವರಪ್ಪ ಸರ್ ಹಾಗೂ ಇ.ಸಿ.ಓ ಇನಾಯತ್ ಸರ್ ವಿದ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸಿದರು.

ಭಾರತೀಯ ಕ್ರಿಕೆಟ್ ಆಟಗಾರನಿಗೆ ಕೊರೋನಾ ಸೋಂಕು, ಕೊಹ್ಲಿ ಟೀಮ್ ಗೆ ಹೆಚ್ಚಿದ ಆತಂಕ.

  ಲಂಡನ್: ಇಂಗ್ಲೆಂಡ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತೀಯ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ ಎನ್ನಲಾಗಿದೆ. ಕ್ರಿಕೆಟ್‌ ಬಜ್‌ ವರದಿಯ ಪ್ರಕಾರ , ಟೀಮ್‌ ಇಂಡಿಯಾದ ಕನಿಷ್ಠ ಒಬ್ಬ ಆಟಗಾರನಾದರೂ ಮಾರಕ ಕೊರೊನಾವೈರಸ್‌ಗೆ ತುತ್ತಾಗಿದ್ದಾನೆ. ಶೀಘ್ರದಲ್ಲೇ ಆಟಗಾರನ ಹೆಸರನ್ನು ಪ್ರಕಟಿಸುವ ನಿರೀಕ್ಷೆಯಿದೆ ಎನ್ನಲಾಗಿದೆ. ಇನ್ನೂ ಕ್ರಿಕೆಟ್‌ ಬಜ್‌ ವರದಿಯ ಪ್ರಕಾರ , ಕೋವಿಡ್ - 19 ಗೆ ಈಡಾಗಿರುವ ಆಟಗಾರನನ್ನು ಪ್ರತ್ಯೇಕಿಸಲಾಗಿದೆ ಮತ್ತು ಮುಂಬರುವ ಮೂರು ದಿನಗಳ ಅಭ್ಯಾಸ ಪಂದ್ಯಕ್ಕಾಗಿ ತಂಡದೊಂದಿಗೆ ಡರ್ಹಾಮ್‌ಗೆ ಪ್ರಯಾಣಿಸುವುದಿಲ್ಲ ಅಂತ ತಿಳಿಸಿದೆ. ಈಗಿನಂತೆ , ಈ ಅಂಕಿ ಅಂಶವು ಒಂದಾಗಿದೆ , ಆದರೆ ಹೆಚ್ಚಿನ ಆಟಗಾರರು ಸೋಂಕಿಗೆ ಒಳಗಾಗಬಹುದು ಎನ್ನಲಾಗಿದ್ದು ಇದರಿಂದ ತಂಡದಲ್ಲಿ ಆತಂಕದ ವಾತವಾರಣ ನಿರ್ಮಾಣವಾಗಿದೆ.   ಕರೋನ ಪರೀಕ್ಷೆಗಳನ್ನು ನಡೆಸುತ್ತಿರುವ ಸಂಸ್ಥೆಯಾದ ಇಂಗ್ಲೆಂಡ್‌ನ ರಾಷ್ಟ್ರೀಯ ಆರೋಗ್ಯ ಸೇವೆ ಶೀಘ್ರದಲ್ಲೇ ಆಟಗಾರನ ಹೆಸರನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ. ಅದೇ ರೀತಿ ಮಾಧ್ಯಮಗಳ ವರದಿಯ ಪ್ರಕಾರ , ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ನಂತರ ಮೂರು ವಾರಗಳ ವಿರಾಮದ ಸಮಯದಲ್ಲಿ ಸೊಂಕಿಗೆ ಈಡಾಗಿರುವ ಆಟಗಾರ ಹೆಚ್ಚು ಸಾರ್ವಜನಿಕ ಸಭೆಗಳಲ್ಲಿ ಇತ್ತೀಚೆಗೆ ಭಾಗವಹಿಸಿದ್ದರು ಎನ್ನಲಾಗಿದೆ. ಡರ್ಹಾಮ್ ತಲುಪಿದ ನಂತರ ಆಟಗಾರರನ್ನು ಮತ್ತೆ ಪರೀಕ್ಷಿಸಲಾಗುವುದು ಎಂದು ವರದಿಯಾಗಿದೆ. ಮೊದಲ ಸುತ್ತಿನ ಪರೀಕ್ಷೆ ...