Wednesday, 30 June 2021

ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿ, ರಾಷ್ಟ್ರಮಟ್ಟಕ್ಕೆ ಆಯ್ಕೆ.

 


ಚಿತ್ರದುರ್ಗ: ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನಿರುದ್ಧ್ ಎಸ್. 2020-21  ಸಾಲಿನ NTSE ( National Talent Search Exam) ಪರೀಕ್ಷೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ.

 ಜನವರಿ 2021 ರಲ್ಲಿ ನಡೆದ NTSE ಪರೀಕ್ಷೆಯಲ್ಲಿ ಚಿತ್ರದುರ್ಗ ತಾಲ್ಲೂಕಿನಿಂದ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನಿರುದ್ಧ್  ಎಸ್, ಮಾರ್ಗದರ್ಶಿ ಶಿಕ್ಷಕರಾದ   ಸಂಪತ್  ಕುಮಾರ್ ಸಿ ಡಿ  ಮಾರ್ಗದರ್ಶನದಲ್ಲಿ ಉತ್ತಮ ಅಂಕಗಳನ್ನು ಪಡೆದು  ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯಕುಮಾರ್, ಕ್ಯಾಂಪಸ್ ಇಂಚಾರ್ಜ್ ಪೃಥ್ವಿಶ್ ಎಸ್. ಎಮ್,  ಮುಖ್ಯೋಪಾದ್ಯಾಯರಾದ ಸಂಪತ್  ಕುಮಾರ್ ಸಿ ಡಿ. ಹೆಡ್ ಕೋಆರ್ಡಿನೇಟರ್ ಬಸವರಾಜಯ್ಯ ಪಿ ಹಾಗೂ ಶಿಕ್ಷಕ ವೃಂದದವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಅಭಿನಂದಿಸುತ್ತಾರೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...