ಕೋವಿಡ್ ಸಾಂಕ್ರಾಮಿಕ ಡೆಲ್ಟಾ ರೂಪಾಂತರವು 'ಡೆಲ್ಟಾ ಪ್ಲಸ್ ಅಥವಾ ಎವೈ.1(AY.1) ರೂಪಾಂತರವಾಗಿ ಪರಿವರ್ತನೆಗೊಂಡಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ನವ ದೆಹಲಿ: ಭಾರತವು ಕೊರೋನಾ 2ನೇ ಅಲೆಯ ವಿರುದ್ಧ
ಹೋರಾಡುತ್ತಿರುವ ಸಮಯದಲ್ಲೇ, ಡೆಲ್ಟಾ ರೂಪಾಂತರಿ ವೈರಸ್ ಹರಡುವಿಕೆಯು
ಇದೀಗ ವೇಗ ಪಡೆದುಕೊಳ್ಳುತ್ತಿದೆ. ಕೋವಿಡ್ ಸಾಂಕ್ರಾಮಿಕ ಡೆಲ್ಟಾ ರೂಪಾಂತರವು 'ಡೆಲ್ಟಾ ಪ್ಲಸ್ ಅಥವಾ ಎವೈ.1(AY.1) ರೂಪಾಂತರವಾಗಿ
ಪರಿವರ್ತನೆಗೊಂಡಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಡೆಲ್ಟಾ ಪ್ಲಸ್ ಅಥವಾ ಬಿ.1.617.2.1(B.1.617.2.1) ರೂಪಾಂತರಿ
ಭಾರತದಲ್ಲಿ ಮೊದಲು ಪತ್ತೆಯಾಗಿದ್ದು ಇದು ಕೊರೋನಾ ಎರಡನೇ ಅಲೆಗೆ ಕಾರಣವಾಗಿತ್ತು. ಹೊಸ
ರೂಪಾಂತರದಿಂದಾಗಿ ರೋಗದ ತೀವ್ರತೆಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿತ್ತು. ಇದರ
ಬೆನ್ನಿಗೆ ದೇಶದಲ್ಲಿ 22 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದ್ದು,
ಈ ಪೈಕಿ 16 ಪ್ರಕರಣಗಳು ಮಹಾರಾಷ್ಟ್ರ, ಕೇರಳ ಮತ್ತು
ಮಧ್ಯ ಪ್ರದೇಶದಲ್ಲಿ ಕಂಡು ಬಂದಿದ್ದು, ಈ ಸಂಬಂಧ ಕೇಂದ್ರದ ಆರೋಗ್ಯ
ಇಲಾಖೆ ಈ ಮೂರು ರಾಜ್ಯಗಳಿಗೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು,
"ಡೆಲ್ಟಾ ಪ್ಲಸ್
ರೂಪಾಂತರವು ಪ್ರಸ್ತುತ ರೂಪಾಂತರ ಪ್ರಕ್ರಿಯೆಯಲ್ಲಿದೆ. ಡೆಲ್ಟಾ ಪ್ಲಸ್ ರೂಪಾಂತರದ ಪ್ರಕರಣಗಳು
ಮಹಾರಾಷ್ಟ್ರದ ರತ್ನಾಗಿರಿ ಮತ್ತು ಜಲ್ಗಾಂವ್ ಮತ್ತು ಕೇರಳ ಮತ್ತು ಮಧ್ಯಪ್ರದೇಶದ ಕೆಲವು
ಭಾಗಗಳಲ್ಲಿ ಪತ್ತೆಯಾಗಿವೆ. ಡೆಲ್ಟಾ ಪ್ಲಸ್ ರೂಪಾಂತರ ಕಂಡುಬರುವ ಜಿಲ್ಲೆಗಳು ಮತ್ತು ಕ್ಲಸ್ಟರ್ಗಳಲ್ಲಿ
ತಕ್ಷಣದ ನಿಯಂತ್ರಣ ಕ್ರಮಗಳು, ವರ್ಧಿತ ಪರೀಕ್ಷೆ, ಟ್ರ್ಯಾಕಿಂಗ್ ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವಂತೆ ಕೇಂದ್ರವು ರಾಜ್ಯಗಳಿಗೆ
ನಿರ್ದೇಶನ ನೀಡಿದೆ. ಅಲ್ಲದೆ, ಸೋಂಕಿತ ವ್ಯಕ್ತಿಗಳ ಮಾದರಿಗಳನ್ನು
ತಕ್ಷಣವೇ INSACOG ನ ಗೊತ್ತುಪಡಿಸಿದ ಪ್ರಯೋಗಾಲಯಗಳಿಗೆ
ಕಳುಹಿಸಲಾಗುವುದು. ಇದರಿಂದ ಕ್ಲಿನಿಕಲ್ ಸಾಂಕ್ರಾಮಿಕ ರೋಗ ಸಂಬಂಧಗಳನ್ನು ಮಾಡಬಹುದು" ಎಂದು
ತಿಳಿಸಿದ್ದಾರೆ.
ಮೂರು ರಾಜ್ಯಗಳಲ್ಲಿ ಭಯಾನಕ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪತ್ತೆ
ಭಾರತ ಸೇರಿದಂತೆ ವಿಶ್ವದ 80 ದೇಶಗಳಲ್ಲಿ ಡೆಲ್ಟಾ ರೂಪಾಂತರ ಪತ್ತೆಯಾಗಿದೆ. ಒಂಬತ್ತು ದೇಶಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿದೆ. ಯುಎಸ್, ಯುಕೆ, ಪೋರ್ಚುಗಲ್, ಸ್ವಿಟ್ಜರ್ಲೆಂಡ್, ಜಪಾನ್, ಪೋಲೆಂಡ್, ನೇಪಾಳ, ಚೀನಾ ಮತ್ತು ರಷ್ಯಾ ದೇಶಗಳಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾಗಿದ್ದು, ಇದು ಕಳವಳಕಾರಿ ಬೆಳವಣಿಗೆಯಾಗಿದೆ. ಇನ್ನೆರಡು ತಿಂಗಳಲ್ಲಿ ಮತ್ತೆ ಕೊರೊನಾ ವೈರಸ್ ಬದಲಾಗಲಿದೆ ಎಂದು ಸಿಸಿಎಂಬಿ ಸಲಹೆಗಾರ ಡಾ ಮಿಶ್ರಾ ತಿಳಿಸಿದ್ದಾರೆ.
ಆದಾಗ್ಯೂ, ಭಾರತೀಯ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಎರಡೂ ಡೆಲ್ಟಾ
ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿವೆ. ಹೀಗಾಗಿ ಪ್ರತಿಯೊಬ್ಬರು ಶೀಘ್ರವಾಗಿ ಲಸಿಕೆ ಪಡೆಯುವುದು
ಉತ್ತಮ" ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ
ತಿಳಿಸಿದ್ದಾರೆ.
No comments:
Post a Comment