ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್ ಸೇರಿದಂತೆ ಕೆಲವೊಂದು ಆರ್ಥಿಕ ಚಟುವಟಿಕೆಗಳನ್ನು ಜೂ.21ರಿಂದ ಪುನರಾರಂಭಿಸಬಹುದು.
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವುದರಿಂದ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್ ಸೇರಿದಂತೆ ಕೆಲವೊಂದು ಆರ್ಥಿಕ ಚಟುವಟಿಕೆಗಳನ್ನು ಜೂ.21ರಿಂದ ಪುನರಾರಂಭಿಸಬಹುದು. ನಿಯಂತ್ರಿತ ಸಂಖ್ಯೆಯ ಜನರು ಸೇರುವಂತೆ ನೋಡಿಕೊಳ್ಳಬೇಕು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.
ಈ ಕುರಿತಂತೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ಅನ್ ಲಾಕ್ 2 .O ದಲ್ಲಿ ರೆಸ್ಟೋರೆಂಟ್, ಮಾಲ್, ಕಟಿಂಗ್ ಶಾಪ್, ಸಲೂನ್, ಸ್ಪಾ, ಮದುವೆ ಮಂಟಪಗಳನ್ನು ತೆರೆಯಬಹುದು. ಆದರೆ, ಶೇ.50ರಷ್ಟು ಜನರು ಸೇರುವಂತೆ ಸೂಚಿಸಬೇಕು. ಅಲ್ಲದೆ, ಅನ್ ಲಾಕ್ 2.0 ಮತ್ತು 3.0 ರ ನಡುವೆ ಎರಡು ವಾರಗಳ ಅಂತರ ಇರುವಂತೆಯೂ ಸೂಚಿಸಿದೆ.
ಈ ಪ್ರದೇಶಗಳಲ್ಲಿ ಹೆಚ್ಚೆಚ್ಚು ಜನರು ಸೇರುವುದರಿಂದ ಸೋಂಕು ಹೆಚ್ಚಾಗಿ ಹರಡಲಿದ್ದು, ಎರಡರ ನಡುವೆ 2 ವಾರಗಳ ಅಂತರ ಇರಬೇಕೆಂದು ಸರ್ಕಾರಕ್ಕೆ ತಿಳಿಸಿದೆ. ಅನ್ ಲಾಕ್ 3.0 ಗೂ ಮೊದಲೂ ಆಕ್ಸಿಜನ್ ಹಾಸಿಗೆಗಳು ಶೇ.60ಕ್ಕಿಂತಲೂ ಕಡಿಮೆ ಇರುವ ಜಿಲ್ಲೆಗಳನ್ನು ಪರಿಶೀಲನೆ ನಡೆಸಬೇಕೆಂದು ತಿಳಿಸಿದೆ.
ಜೂನ್ ಅಂತ್ಯದವರೆಗೂ ನೈಟ್ ಕಫ್ರ್ಯೂ ಮುಂದುವರೆಸಬೇಕು.
ಸಾರ್ವಜನಿಕ ರ್ಯಾಲಿ, ಧರಣಿ,
ಜಾತ್ರೆ ಹಾಗೂ ಹಬ್ಬಗಳ ಮೇಲೆ ನಿರ್ಬಂಧ ಹೇರಬೇಕು. ಜೂ.21ರಿಂದ 2ನೇ ಹಂತದ ಅನ್ಲಾಕ್ ಆರಂಭವಾಗಲಿದ್ದು, , ಜುಲೈ.5 ರಿಂದ ಮೂರನೇ ಹಂತದ ಅನ್ಲಾಕ್ ಆರಂಭವಾಗಲಿದೆ.
No comments:
Post a Comment