Monday 16 August 2021

1 ನೇ ತರಗತಿಯಿಂದ ಶಾಲೆ ಆರಂಭ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್.

 

ಬೆಂಗಳೂರು : ರಾಜ್ಯದಲ್ಲಿ 1 ನೇ ತರಗತಿಯಿಂದ ಶಾಲೆ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಂದನೇ ತರಗತಿಯಿಂದಲೇ ಶಾಲೆ ಆರಂಭಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಆಗಸ್ಟ್ 30 ರಂದು ತಜ್ಞರ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶೇ.2 ರಷ್ಟು ಪಾಸಿಟಿವಿಟಿ ಕೆಳಗಿರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆಗಳನ್ನು ಆರಂಭಿಸಲಾಗುವುದು. ಮಕ್ಕಳಿಗೆ ಹಾಜರಾತಿ ಕಡ್ಡಾಯ ಮಾಡಿಲ್ಲ. ಸೋಂಕು ಪತ್ತೆಯಾದರೆ ಅಂತಹ ಶಾಲೆಗಳನ್ನು ಕ್ಲೋಸ್ ಮಾಡುತ್ತೇವೆ. ಮಕ್ಕಳ ಹಿತದೃಷ್ಟಿಯಿಂದ ಆಗಸ್ಟ್ 23 ರಿಂದ ಪ್ರೌಢಶಾಲೆ ಮತ್ತು ಪಿಯು ತರಗತಿ ಆರಂಭಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

No comments:

Post a Comment