Tuesday 24 August 2021

'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ದುರಂತ : ಪೊಲೀಸ್ ವಿಚಾರಣೆ ಬಳಿಕ ನಟಿ 'ರಚಿತಾ ರಾಮ್' ಹೇಳಿದ್ದೇನು..?

 

ರಾಮನಗರ: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ಮೃತಪಟ್ಟ ಪ್ರಕರಣಕ್ಕೆ 

ಸಂಬಧಿಸಿದಂತೆ ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಗೆ ಇಂದು ಹಾಜರಾಗಿದ್ದಾರೆ.

ಡಿವೈಎಸ್ಪಿ ಮೋಹನ್ ಕುಮಾರ್ ಅವರ ಎದುರು ವಿಚಾರಣೆಗೆ ಹಾಜರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಚಿತಾ ರಾಮ್ ಅವರಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಬಿಡದಿ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ನಟಿ ರಚಿತಾ ರಾಮ್ ವಿಚಾರಣೆಗೆ ಹಾಜರಾಗಿದ್ದಾರೆ.

ಪೊಲೀಸ್ ವಿಚಾರಣೆ ಬಳಿಕ ನಟಿ ರಚಿತಾ ರಾಮ್ ಹೇಳಿದ್ದೇನು..?

ಪೊಲೀಸ್ ವಿಚಾರಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ರಚಿತಾ ರಾಮ್ ಮೊದಲು ನನಗೆ ವಿಷಯ ಗೊತ್ತಾಗಿರಲಿಲ್ಲ, ಬಳಿಕ ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡೆ. ಘಟನೆ ನಡೆದ ವೇಳೆ ನಾನು ಸ್ಥಳದಲ್ಲಿ ಇರಲಿಲ್ಲ , ಉದ್ದೇಶಪೂರ್ವಕವಾಗಿ ನಡೆದ ಘಟನೆ ನಡೆದಿಲ್ಲ,

ಘಟನೆ ಬಗ್ಗೆ ನನಗೂ ನೋವಿದೆ. ಘಟನೆ ನಡೆದ ದಿನ ನಾನು ಸ್ಥಳದಲ್ಲಿ ಇರಲಿಲ್ಲ, ಆದ್ದರಿಂದ ಏನೂ ಹೇಳಲು ಸಾಧ್ಯವಾಗಲಿಲ್ಲ, ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನೋಡೋಣ ಎಂದು ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸ್ ವಿಚಾರಣೆ ಬಳಿಕ ನಟಿ ರಚಿತಾ ರಾಮ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಮನಗರದಲ್ಲಿ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಮೃತಪಟ್ಟಿದ್ದರು. ಪ್ರಕರಣ ಸಂಬಂಧ, ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಇಂತಹ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನವಿಧಿಸಿ ಆದೇಶಿಸಿತ್ತು. , ಆರೋಪಿಗಳಾದಂತ ನಿರ್ದೇಶಕ ಶಂಕರಯ್ಯ, ಫೈಟ್ ಮಾಸ್ಟರ್ ವಿನೋದ್ ಹಾಗೂ ಕ್ರೈನ್ ಚಾಲಕ ಮಹಾದೇವ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.

No comments:

Post a Comment