Saturday 21 August 2021

ಸೆಲ್ಫಿ ತೆಗೆಯಲು ಹೋಗಿ ದುರಂತ; ನೋಡ ನೋಡುತ್ತಿದ್ದಂತೆಯೇ ಸಮುದ್ರದಲ್ಲಿ ಕಣ್ಮರೆಯಾದ ವ್ಯಕ್ತಿ.

 

ಕಾರವಾರ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗನೋರ್ವ ಸಮುದ್ರಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಓಂ ಬೀಚ್ ನಲ್ಲಿ ನಡೆದಿದೆ.

ಕುಮಾರ್ ಶೇಕಪ್ಪ (35) ಸಮುದ್ರಪಾಲಾಗಿರುವ ದುರ್ದೈವಿ. ಹಾವೇರಿ ಜಿಲ್ಲೆಯ ಹಾನಗಲ್ ನಿವಾಸಿಯಾದ ಕುಮಾರ್ ಸೇರಿದಂತೆ ಒಟ್ಟು 12 ಜನರು ಪ್ರವಾಸಕ್ಕಾಗಿ ಬಂದಿದ್ದರು ಎನ್ನಲಾಗಿದೆ.

ಓಂ ಬೀಚ್ ನಲ್ಲಿ ಸೆಲ್ಫಿಗಾಗಿ ಕಲ್ಲಿನ ಮೇಲೆ ನಿಂತಿದ್ದ ಕುಮಾರ್, ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದಂತೆ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ತಕ್ಷಣ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದಾರೆ ಆದರೆ ಅಲೆಗಳ ಅಬ್ಬರಕ್ಕೆ ಸಿಲುಕಿರುವ ವ್ಯಕ್ತಿ ಸಮುದ್ರದಲ್ಲಿ ಕಣ್ಮರೆಯಾಗಿದ್ದಾರೆ. ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments:

Post a Comment