Skip to main content

T20 World Cup 2022: ಇಂಜುರಿ ನಡುವೆಯೂ ಟಿ20 ವಿಶ್ವಕಪ್​ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹಾರಲಿರುವ ಬುಮ್ರಾ..!

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (T20 World Cup) ಆರಂಭಕ್ಕೆ 20 ದಿನಗಳಿಗಿಂತ ಕಡಿಮೆ ಸಮಯ ಉಳಿದಿದೆ. ಟೀಂ ಇಂಡಿಯಾ (Team India ) ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಆಡಲಿದ್ದು, ಅದಕ್ಕೂ ಮೊದಲು ಜಸ್ಪ್ರೀತ್ ಬುಮ್ರಾ (Jasprit Bumrah) ಗಾಯಗೊಂಡಿರುವುದು ತಂಡದ ತಲೆನೋವನ್ನು ಹೆಚ್ಚಿಸಿದೆ. ಹೀಗಾಗಿ ಬುಮ್ರಾ ವಿಶ್ವಕಪ್​ನಿಂದ ಹೊರಗುಳಿಯುತ್ತಾರೆ ಎಂಬ ವರದಿಗಳು ಈಗಾಗಲೇ ಹರಿದಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ ವಿಶ್ವಕಪ್‌ಗೂ ಮುನ್ನ ಚೇತರಿಸಿಕೊಳ್ಳಬಹುದೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ ಜಾಣ್ಮೆಯ ನಡೆ ಅನುಸರಿಸುತ್ತಿರುವ ಬಿಸಿಸಿಐ ಬುಮ್ರಾರನ್ನು ಟೀಂ ಇಂಡಿಯಾ ಜೊತೆ ಆಸ್ಟ್ರೇಲಿಯಾಕ್ಕೆ ಕಳುಹಿಸಲು ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ.

ಬುಮ್ರಾ ವಿಶ್ವಕಪ್‌ನಲ್ಲಿ ಆಡುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದಾಗ್ಯೂ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಉಳಿದ ಎರಡು ಪಂದ್ಯಗಳನ್ನು ಆಡಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು ಮಂಡಳಿಯು ಶುಕ್ರವಾರ ಬೆಳಿಗ್ಗೆ ತಿಳಿಸಿದೆ. ಅಲ್ಲದೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ವೈದ್ಯಕೀಯ ತಜ್ಞರು ಅವರನ್ನು ಪರೀಕ್ಷಿಸುತ್ತಿದ್ದು, ಆನಂತರವೇ ಬಿಸಿಸಿಐ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ.

ತಂಡದ ಜೊತೆ ಆಸ್ಟ್ರೇಲಿಯಾಕ್ಕೆ ಹಾರಲಿರುವ ಬುಮ್ರಾ
ವಿಶ್ವಕಪ್‌ಗೆ ಮುನ್ನವೇ ಬುಮ್ರಾ ಈ ಸಮಸ್ಯೆಯಿಂದ ಹೊರಬರಲಿ ಎಂದು ಬಿಸಿಸಿಐ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇನ್ಸೈಡ್‌ಸ್ಪೋರ್ಟ್‌ನ ವರದಿ ಪ್ರಕಾರ, ಗಾಯದ ಹೊರತಾಗಿಯೂ ಬುಮ್ರಾ ಅವರನ್ನು ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಕಳುಹಿಸಲು ಬಿಸಿಸಿಐ ಚಿಂತಿಸಿದೆ ಎಂದು ಹೇಳಿದೆ.

ಈಗ ತಿಳಿದುಬಂದಿರುವ ಮಾಹಿತಿ ಪ್ರಕಾರ ಇಂಜುರಿಗೊಂಡಿರುವ ಬುಮ್ರಾ ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ. ಬದಲಿಗೆ ವಿಶ್ರಾಂತಿ ಮಾತ್ರ ಬೇಕಾಗಿದ್ದು, ಅಕ್ಟೋಬರ್ 15 ರೊಳಗೆ ಬುಮ್ರಾ ಫಿಟ್ ಆದ್ದರೆ ಟಿ20 ವಿಶ್ವಕಪ್​ನಲ್ಲಿ ಆಡಿಸುವ ಯೋಜನೆಯನ್ನು ಬಿಸಿಸಿಐ ಹಾಕಿಕೊಂಡಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 15 ರೊಳಗೆ ಬದಲಾವಣೆ ಸಾಧ್ಯ

ಟಿ20 ವಿಶ್ವಕಪ್ ತಂಡದೊಂದಿಗೆ ಬುಮ್ರಾ ಅವರನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸುವುದರೊಂದಿಗೆ ಒಂದು ವೇಳೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಬುಮ್ರಾ ಫಿಟ್ ಆದರೆ ಅವರನ್ನು ತಂಡದಲ್ಲಿ ಆಡಿಸುವ ಬಗ್ಗೆ ಬಿಸಿಸಿಐ ಚಿಂತಿಸಿದೆ. ಅಲ್ಲದೆ, ಅವರು ಆ ಹೊತ್ತಿಗೆ ಫಿಟ್ ಆಗದಿದ್ದರೆ, ಬದಲಿಯಾಗಿ ಇನ್ನೊಬ್ಬ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳುವ ಆಯ್ಕೆಯು ಮಂಡಳಿಗೆ ಯಾವಾಗಲೂ ಇರುತ್ತದೆ. ICC ನಿಯಮಗಳ ಪ್ರಕಾರ, ಅಕ್ಟೋಬರ್ 15 ರವರೆಗೆ, ಎಲ್ಲಾ ತಂಡಗಳು ಗಾಯದ ಸಂದರ್ಭದಲ್ಲಿ ತಮ್ಮ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದಾಗಿದೆ. ಅಲ್ಲದೆ ಇದಕ್ಕಾಗಿ ಪಂದ್ಯಾವಳಿಯ ಸಮಿತಿಯಿಂದ ಯಾವುದೇ ಅನುಮತಿ ಅಗತ್ಯವಿಲ್ಲ.

ಸಿರಾಜ್ ಕೂಡ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೂ ಹೋಗಲಿದ್ದಾರೆ

ಇದಲ್ಲದೆ, ಮೊಹಮ್ಮದ್ ಶಮಿ ಮತ್ತು ದೀಪಕ್ ಚಹಾರ್ ಒಳಗೊಂಡಿರುವ ತಂಡದೊಂದಿಗೆ ಸ್ಟ್ಯಾಂಡ್‌ಬೈ ಆಟಗಾರರನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಲು ಬಿಸಿಸಿಐ ಈಗಾಗಲೇ ನಿರ್ಧರಿಸಿದೆ. ವರದಿಯ ಪ್ರಕಾರ, ಈಗ ಮೊಹಮ್ಮದ್ ಸಿರಾಜ್ ಕೂಡ ಇದರಲ್ಲಿ ಸೇರಿದ್ದು, ಅವರು ಕೂಡ ಆಸ್ಟ್ರೇಲಿಯಾಕ್ಕೆ ಹೋಗುವ ತಂಡದಲ್ಲಿ ಭಾಗವಾಗಲಿದ್ದಾರೆ. ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಟಿ20 ಪಂದ್ಯಗಳಿಗೆ ಆಯ್ಕೆಗಾರರು ಸಿರಾಜ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದ್ದಾರೆ.



source https://tv9kannada.com/sports/cricket-news/jasprit-bumrah-may-fly-to-australia-for-t20-world-cup-2022-decision-on-his-inclusion-by-oct-15-psr-au14-449039.html

Comments

Popular posts from this blog

ಪ್ರಶ್ನಿಸದೇ ಒಪ್ಪಬೇಡಿ!? ಎಂದ ವಿಚಾರವಾದಿ, ನರಸಿಂಹಯ್ಯನವರ ಜನ್ಮ ದಿನದ ವಿಶೇಷ.

ನವೀನ್ ಪಿ ಆಚಾರ್, ಸಹ ಶಿಕ್ಷಕರು ಮೆದೇಹಳ್ಳಿ.ಇವರಿಂದ,ನರಸಿಂಹಯ್ಯನವರ ಜನ್ಮ ದಿನದ, ಕುರಿತಾಗಿ ವಿಶೇಷ ಲೇಖನ.   ಈ ವಾಕ್ಯವನ್ನು ಎಲ್ಲೋ ಕೇಳಿದ್ದೇವೆ, ಅಂತ ಅನ್ನಿಸಿದರೆ ಅದರ ಕರ್ತೃ ಡಾ.ಎಚ್.ನರಸಿಂಹಯ್ಯ,  ಇವರು  ಯಾವಾಗಲೂ ವೈಜ್ಞಾನಿಕವಾಗಿ ಚಿಂತಿಸುವ ಮೂಲಕ ನಾಡಿಗೆ ಬೆಳಕಾಗಿದ್ದರು. ಅಮೇರಿಕಾದಲ್ಲಿ ಡಾಕ್ಟರೇಟ್‌ ಪಡೆದ ನಂತರವೂ ಹಲವು ವರ್ಷಗಳ ಕಾಲ ಬೆಂಗಳೂರಿನ ನ್ಯಾಷನಲ್‌ ಕಾಲೇಜಿನಲ್ಲಿ ಶಿಕ್ಷಕರಾಗಿದ್ದ ಅವರು , ಎಚ್.ಎನ್‌ ಮೇಷ್ಟ್ರು! ಎಂದೇ ಪ್ರಖ್ಯಾತಿ ಪಡೆದವರು. ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಜೈಲುವಾಸವನ್ನೂ ಅನುಭವಿಸಿದವರು. ಮಹಾತ್ಮ ಗಾಂಧಿಜಿಯವರು ಬೆಂಗಳೂರಿಗೆ ಬಂದಾಗ ಅವರ ಭಾಷಣವನ್ನು ಕನ್ನಡಕ್ಕೆ ತರ್ಜುಮೆ ಮಾಡಿದವರು. ನಾಡಿನ ತುಂಬೆಲ್ಲ ಮೂಢನಂಬಿಕೆಯನ್ನು ವಿರೋಧಿಸುತ್ತಾ ವೈಜ್ಞಾನಿಕ ಚಳುವಳಿಗೆ ನಾಂದಿ ಹಾಡಿದ ಮಹಾಪುರುಷನಿಗೆ ಇಂದು ಜನ್ಮ ದಿನದ ಸಂಭ್ರಮ. " ನಿಂಬೆಹಣ್ಣು ಬೇಡ ಕುಂಬಳಕಾಯಿ ಕೊಡಿ" ಹೀಗೆಂದು ಸಾಯಿ ಬಾಬಾರನ್ನು ಪ್ರಶ್ನಿಸಿದ್ದು ಎಚ್. ನರಸಿಂಹಯ್ಯ ಅವರು. ಇದರ ಹಿನ್ನೆಲೆ ಇಷ್ಟೇ. ಸಾಯಿ ಬಾಬಾ ತನ್ನ ಭಕ್ತರಿಗೆ ಆಶೀರ್ವದಿಸಲು ಚೂಂ ಮಂತ್ರ ಮಾಡಿ ನಿಂಬೆ ಹಣ್ಣು , ಉಂಗುರು , ಚೈನ್ , ಎಚ್.ಎಂ.ಟಿ ವಾಚ್ , ಬೂದಿ... ಹೀಗೆ ಏನೆಲ್ಲಾ ಕೊಡುತ್ತಿದ್ದರು ಎಂಬುದು ಬಾಬಾ ಇದ್ದ ಕಾಲದ ಪ್ರತೀತಿ , ನಂಬಿಕೆ ಮತ್ತು ಅದನ್ನು ಕಂಡವರಿಗೆ ಸತ್ಯ ?! ಹೇಳೀ ಕೇಳೀ ವೈಜ್ಞಾನಿಕ ಮನೋಭಾವದ ಎಚ್.ಎನ್. ಆಯ್ತಪ್ಪಾ ನಿಮ್...

ಮೆದೇಹಳ್ಳಿಯಲ್ಲಿ: ವಿಶೇಷ ದಾಖಲಾತಿ ಆಂದೋಲನ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಕ್ಷೇತ್ರ ಸಮನ್ವಯಾಧಕಾರಿಗಳ ಕಚೇರಿ , ಸಾರ್ವಜನಿಕ ಶಿಕ್ಷಣ ಇಲಾಖೆ , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ , ಚಿತ್ರದುರ್ಗ ತಾಲ್ಲೂಕು ಮತ್ತು ಜಿಲ್ಲಾ ಘಟಕ , ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಮೆದೇಹಳ್ಳಿ   ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಡಯಟ್‌ ಪ್ರಾಂಶುಪಾಲರಾದ ಶ್ರೀ ಎಸ್.ಕೆ.ಬಿ.ಪ್ರಸಾದ್‌ ಅವರು ಮಾತನಾಡಿ  ಸರ್ಕಾರಿ ಶಾಲೆಗಳ ಬಲವರ್ಧನೆಗೆ ಎಲ್ಲರೂ ಶ್ರಮಪಡಬೇಕು ಈ ನಿಟ್ಟಿನಲ್ಲಿ ನೌಕರರ ಸಂಘಟನೆ ಮತ್ತು ಶಿಕ್ಷಕರ ಸಂಘಗಳು ಮತ್ತು ಶಿಕ್ಷಣ ಇಲಾಖೆಯವರು ಮಾಡುತ್ತಿರುವ ವಿಶೇಷ ದಾಖಲಾತಿ ಅಂದೋಲನವು ತುಂಬಾ ಅನುಕೂಲಕಾರಿ ಎಂದರು. ಕೋವಿಡ್‌ ಸಂದರ್ಭದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು , ಎಲ್ಲರಿಗೂ ಮುಕ್ತ ಶಿಕ್ಷಣ ದೊರೆಯಬೇಕು. ಅದಕ್ಕೆ ಸಾಕಷ್ಟು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಎಲ್ಲಾ ಪೋಷಕರು ಕೋವಿಡ್‌ ಹೊಡೆತದಿಂದ ಹಿಂಜರಿತ ಹೊಂದಿದ್ದಾರೆ ಇಂತಹವರು ಖಾಸಗಿ ಶಾಲೆಗಳ ಶುಲ್ಕ ತುಂಬಲು ಸಾಧ್ಯವಾಗದ ಸಂದರ್ಭದಲ್ಲಿ ಸರ್ಕಾರಿ ಶಾಲೆಗೆ ಎಲ್ಲರೂ ದಾಖಲಾತಿ ಮಾಡಿಸುತ್ತಿದ್ದಾರೆ. ನಮ್ಮ ಸರ್ಕಾರಿ ಶಾಲೆಗಳಲ್ಲಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಶಿಕ್ಷಣ ನೀಡಲಾಗುತ್ತಿದೆ. ದೂರದರ್ಶನ ಮತ್ತು ರೇಡಿಯೊ ಪಾಠಗಳನ್ನು ಪ್ರಸ...

Give the post of district president of the BJP party in the district to a leader from an oppressed community.

Report and photo courtesy of Suresh Pattan, Mo: 98862 958 Chitradurga Feb. 28 BJP's SC, ST unit office bearers and the oppressed community, who were deprived of the post of Chitradurga BJP district president, have urged the state leaders to give the post of BJP district president to any leader from the oppressed community in the district. Speaking at a press conference at the tourist temple in Chitradurga city, BJP General Secretary Sampath Kumar said that the BJP party has grown a lot in the country. It is not only those who are here but also BJP workers . There are BJP workers in every house. Since the birth of the BJP party, it has been organizing. It has been changing the responsibilities of the organization every 3 years. From the party's national president to the presidents of the party's fronts , there are changes. Only some communities in the district are responsible. The exploited communities are not getting responsible positions. The responsibilities of the party...