Wednesday, 12 October 2022

ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕಾರ್ಯಕರ್ತ ಸಾವು :  10 ಲಕ್ಷ ಪರಿಹಾರ : ಡಿಕೆ ಶಿವಕುಮಾರ್

ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ವೇಳೆ ಸಾವನ್ನಪ್ಪಿದ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಚಳ್ಳಕೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉತ್ತರೆದಿಬ್ಬ ಗ್ರಾಮದಿಂದ  ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ  ರಮೇಶ್‌ ಅವರು ಭಾಗವಹಿಸಿ, ವಾಪಸ್ ಹೋಗುವಾಗ ಹಿರಿಯೂರಿನಲ್ಲಿ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದರು.
ನಮ್ಮ ಪಕ್ಷದ ಕಾರ್ಯಕರ್ತರು ಮೃತರ ಕುಟುಂಬಕ್ಕೆ ಭೇಟಿ ಸಾಂತ್ವನ ಹೇಳಲಿದ್ದಾರೆ. ಅವರ ಕುಟುಂಬದ ಜೊತೆ ನಾವಿದ್ದೇವೆ  ಎಂದು ಹೇಳಿದರು.

The post ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕಾರ್ಯಕರ್ತ ಸಾವು :  10 ಲಕ್ಷ ಪರಿಹಾರ : ಡಿಕೆ ಶಿವಕುಮಾರ್ first appeared on Kannada News | suddione.



source https://suddione.com/activist-death-in-bharat-jodo-padayatra-10-lakh-compensation-dk-shivakumar/

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...