Skip to main content

INDW vs AUSW: ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದ ಆಸೀಸ್: ಭಾರತೀಯ ಮಹಿಳೆಯರಿಗೆ ಎರಡನೇ ಸೋಲು

INDW vs AUSW

ಭಾರತ ಪ್ರವಾಸ ಬೆಳೆಸಿರುವ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡ ಟಿ20 ಸರಣಿ ಆಡುತ್ತಿದ್ದು ಬೊಂಬಾಟ್ ಪ್ರದರ್ಶನ ತೋರುತ್ತಿದೆ. ಬುಧವಾರ ಮುಂಬೈನ ಬ್ರಬೌರ್ನ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ 21 ರನ್​ಗಳ ಜಯ ಸಾಧಿಸುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಮುನ್ನಡೆ ಪಡೆದುಕೊಂಡಿದೆ. ಕಾಂಗರೂ ಪಡೆಯ ಬ್ಯಾಟಿಂಗ್-ಬೌಲಿಂಗ್ ಅಬ್ಬರಕ್ಕೆ ತಬ್ಬಿಬ್ಬಾದ ಭಾರತ ಮಹಿಳಾ ತಂಡ ಎರಡನೇ ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ ಆಸೀಸ್ 9 ವಿಕೆಟ್​ಗಳ ಜಯ ಸಾಧಿಸಿದರೆ, ದ್ವಿತೀಯ ಟಿ20ಯಲ್ಲಿ ನಡೆದ ಸೂಪರ್ ಓವರ್​ನಲ್ಲಿ ಭಾರತ ಗೆಲುವು ಕಂಡಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಿಸುವ ಮೂಲಕ ಮುನ್ನಡೆ ಸಾಧಿಸಿದೆ. ಭಾರತ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

ತೃತೀಯ ಟಿ20 ಯಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಇಳಿದ ಆಸ್ಟ್ರೇಲಿಯಾ ಮೊದಲ ಓವರ್​ನಲ್ಲೇ ರೇಣುಕಾ ಸಿಂಗ್ ಬೌಲಿಂಗ್​ನಲ್ಲಿ ಅಲಿಸ್ಸಾ ಹೀಲೆ (1) ಔಟಾದರು. ನಂತರದ ಓವರ್​ನಲ್ಲಿ ತಹಿಲಾ ಮೆಕ್​ಘ್ರತ್ ಕೂಡ 1 ರನ್​ಗೆ ನಿರ್ಗಮಿಸಿದರು. ನಂತರ ಬೆತ್ ಮೂನೆ ಹಾಗೂ ಎಲಿಸ್ಸಾ ಪೆರಿ ಉತ್ತಮ ಜೊತೆಯಾಟ ಆಡಿ ತಂಡವನ್ನು ಮೇಲೆತ್ತಿದರು. ಈ ಜೋಡಿ 64 ರನ್​ಗಳ ಜೊತೆಯಾಟ ಆಡತು. ಚೆನ್ನಾಗಿಯೆ ಆಡುತ್ತಿದ್ದ ಮೋನಿ 22 ಎಸೆತಗಳಲ್ಲಿ 30 ರನ್ ಗಳಿಸಿ ದೇವಿಕಾ ಬೌಲಿಂಗ್​ನಲ್ಲಿ ಔಟಾದರು. ಆಶ್ಲೆಗ್ ಗಾರ್ಡನ್ 7 ರನ್​ಗೆ ಸುಸ್ತಾದರು.

ಅಪ್ಪನಂತೆಯೇ ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ ಅರ್ಜುನ್ ತೆಂಡೂಲ್ಕರ್..!

ಈ ಸಂದರ್ಭ ಗ್ರಾನ್ಸ್ ಹ್ಯಾರಿಸ್ ಹಾಗೂ ಎಲಿಸ್ಸಾ ಪೆರಿ ಬೊಂಬಾಟ್ ಬ್ಯಾಟಿಂಗ್ ಪ್ರದರ್ಶಿಸಿದರು. ಸ್ಫೋಟಕ ಆಟವಾಡಿದ ಈ ಜೋಡಿ ಭಾರತೀಯ ಬೌಲರ್​ಗಳ ಬೆವರಿಳಿಸಿದರು. ಪೆರಿ 47 ಎಸೆತಗಳಲ್ಲಿ 9 ಫೋರ್, 3 ಸಿಕ್ಸರ್​ನೊಂದಿಗೆ 75 ರನ್ ಚಚ್ಚಿದರೆ, ಹ್ಯಾರಿಸ್ ಕೇವಲ 18 ಎಸೆತಗಳಲ್ಲಿ 4 ಫೋರ್, 3 ಸಿಕ್ಸರ್​ನೊಂದಿಗೆ 41 ರನ್ ಸಿಡಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತು. ಭಾರತ ಪರ ರೇಣುಕಾ ಸಿಂಗ್, ಅಂಜಲಿ, ದೀಪ್ತಿ ಹಾಗೂ ದೇವಿಕಾ ತಲಾ 2 ವಿಕೆಟ್ ಪಡೆದರು.

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಭಾರತ ಮಹಿಳಾ ತಂಡ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆಗೆ ಸ್ಮೃತಿ ಮಂದಾನ (1) ವಿಕೆಟ್ ಕಳೆದುಕೊಂಡಿತು. ಜೆಮಿಯಾ ರೋಡ್ರಿಗಸ್ 16 ರನ್​ಗೆ ಔಟಾದರು. ಈ ಸಂದರ್ಭ ತಂಡವನ್ನು ಮೇಲೆತ್ತಿದ ಶಫಾಲಿ ವರ್ಮಾ ಹಾಗೂ ನಾಯಕಿ ಹರ್ಮನ್​ಪ್ರೀತ್ ಕೌರ್ ಅತ್ಯುತ್ತಮ ಜೊತೆಯಾಟ ಆಡಿದರು. ಗೆಲುವಿಗೆ ಹೋರಾಟ ನಡೆಸಿದ ಈ ಜೋಡಿ ತಂಡದ ಮೊತ್ತವನ್ನು 100 ರ ಗಡಿ ದಾಟಿಸಿದರು. ಶಫಾಲಿ 41 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಕೌರ್ 27 ಎಸೆತಗಳಲ್ಲಿ 37 ರನ್​ಗಳ ಕೊಡುಗೆ ನೀಡಿದರು. ಆದರೆ, ನಂತರ ಬಂದ ಬ್ಯಾಟರ್​ಗಳ ಪೈಕಿ ದೀಪ್ತಿ ಶರ್ಮಾ (ಅಜೇಯ 25) ಬಿಟ್ಟರೆ ಮತ್ಯಾರೂ ಹೋರಾಟ ನಡೆಸಲಿಲ್ಲ.

20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ ಮಹಿಳಾ ತಂಡ 151 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಆಸ್ಟ್ರೇಲಿಯಾ ಪರ ಡಾರ್ಸಿ ಬ್ರೌನ್ ಮತ್ತು ಗಾರ್ಡನರ್ ತಲಾ 2 ವಿಕೆಟ್ ಪಡೆದರೆ ಮೆಗನ್ ಸ್ಕಟ್ ಹಾಗೂ ನಿಕೋಲ ಕರೆ ತಲಾ 1 ವಿಕೆಟ್ ಪಡೆದರು. ಎಲಿಸ್ಸಾ ಪೆರಿ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-2 ರ ಹಿನ್ನಡೆಯಲ್ಲಿದೆ. ನಾಲ್ಕನೇ ಟಿ20 ಪಂದ್ಯ ಡಿಸೆಂಬರ್ 17 ರಂದು ಬ್ರಬೌರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



source https://tv9kannada.com/sports/cricket-news/indian-womens-team-batting-collapsed-ellyse-perry-shine-and-australia-21-run-victory-in-the-third-t20-vb-au48-485903.html

Comments

Popular posts from this blog

ಪ್ರಶ್ನಿಸದೇ ಒಪ್ಪಬೇಡಿ!? ಎಂದ ವಿಚಾರವಾದಿ, ನರಸಿಂಹಯ್ಯನವರ ಜನ್ಮ ದಿನದ ವಿಶೇಷ.

ನವೀನ್ ಪಿ ಆಚಾರ್, ಸಹ ಶಿಕ್ಷಕರು ಮೆದೇಹಳ್ಳಿ.ಇವರಿಂದ,ನರಸಿಂಹಯ್ಯನವರ ಜನ್ಮ ದಿನದ, ಕುರಿತಾಗಿ ವಿಶೇಷ ಲೇಖನ.   ಈ ವಾಕ್ಯವನ್ನು ಎಲ್ಲೋ ಕೇಳಿದ್ದೇವೆ, ಅಂತ ಅನ್ನಿಸಿದರೆ ಅದರ ಕರ್ತೃ ಡಾ.ಎಚ್.ನರಸಿಂಹಯ್ಯ,  ಇವರು  ಯಾವಾಗಲೂ ವೈಜ್ಞಾನಿಕವಾಗಿ ಚಿಂತಿಸುವ ಮೂಲಕ ನಾಡಿಗೆ ಬೆಳಕಾಗಿದ್ದರು. ಅಮೇರಿಕಾದಲ್ಲಿ ಡಾಕ್ಟರೇಟ್‌ ಪಡೆದ ನಂತರವೂ ಹಲವು ವರ್ಷಗಳ ಕಾಲ ಬೆಂಗಳೂರಿನ ನ್ಯಾಷನಲ್‌ ಕಾಲೇಜಿನಲ್ಲಿ ಶಿಕ್ಷಕರಾಗಿದ್ದ ಅವರು , ಎಚ್.ಎನ್‌ ಮೇಷ್ಟ್ರು! ಎಂದೇ ಪ್ರಖ್ಯಾತಿ ಪಡೆದವರು. ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಜೈಲುವಾಸವನ್ನೂ ಅನುಭವಿಸಿದವರು. ಮಹಾತ್ಮ ಗಾಂಧಿಜಿಯವರು ಬೆಂಗಳೂರಿಗೆ ಬಂದಾಗ ಅವರ ಭಾಷಣವನ್ನು ಕನ್ನಡಕ್ಕೆ ತರ್ಜುಮೆ ಮಾಡಿದವರು. ನಾಡಿನ ತುಂಬೆಲ್ಲ ಮೂಢನಂಬಿಕೆಯನ್ನು ವಿರೋಧಿಸುತ್ತಾ ವೈಜ್ಞಾನಿಕ ಚಳುವಳಿಗೆ ನಾಂದಿ ಹಾಡಿದ ಮಹಾಪುರುಷನಿಗೆ ಇಂದು ಜನ್ಮ ದಿನದ ಸಂಭ್ರಮ. " ನಿಂಬೆಹಣ್ಣು ಬೇಡ ಕುಂಬಳಕಾಯಿ ಕೊಡಿ" ಹೀಗೆಂದು ಸಾಯಿ ಬಾಬಾರನ್ನು ಪ್ರಶ್ನಿಸಿದ್ದು ಎಚ್. ನರಸಿಂಹಯ್ಯ ಅವರು. ಇದರ ಹಿನ್ನೆಲೆ ಇಷ್ಟೇ. ಸಾಯಿ ಬಾಬಾ ತನ್ನ ಭಕ್ತರಿಗೆ ಆಶೀರ್ವದಿಸಲು ಚೂಂ ಮಂತ್ರ ಮಾಡಿ ನಿಂಬೆ ಹಣ್ಣು , ಉಂಗುರು , ಚೈನ್ , ಎಚ್.ಎಂ.ಟಿ ವಾಚ್ , ಬೂದಿ... ಹೀಗೆ ಏನೆಲ್ಲಾ ಕೊಡುತ್ತಿದ್ದರು ಎಂಬುದು ಬಾಬಾ ಇದ್ದ ಕಾಲದ ಪ್ರತೀತಿ , ನಂಬಿಕೆ ಮತ್ತು ಅದನ್ನು ಕಂಡವರಿಗೆ ಸತ್ಯ ?! ಹೇಳೀ ಕೇಳೀ ವೈಜ್ಞಾನಿಕ ಮನೋಭಾವದ ಎಚ್.ಎನ್. ಆಯ್ತಪ್ಪಾ ನಿಮ್...

ಮೆದೇಹಳ್ಳಿಯಲ್ಲಿ: ವಿಶೇಷ ದಾಖಲಾತಿ ಆಂದೋಲನ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಕ್ಷೇತ್ರ ಸಮನ್ವಯಾಧಕಾರಿಗಳ ಕಚೇರಿ , ಸಾರ್ವಜನಿಕ ಶಿಕ್ಷಣ ಇಲಾಖೆ , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ , ಚಿತ್ರದುರ್ಗ ತಾಲ್ಲೂಕು ಮತ್ತು ಜಿಲ್ಲಾ ಘಟಕ , ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಮೆದೇಹಳ್ಳಿ   ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಡಯಟ್‌ ಪ್ರಾಂಶುಪಾಲರಾದ ಶ್ರೀ ಎಸ್.ಕೆ.ಬಿ.ಪ್ರಸಾದ್‌ ಅವರು ಮಾತನಾಡಿ  ಸರ್ಕಾರಿ ಶಾಲೆಗಳ ಬಲವರ್ಧನೆಗೆ ಎಲ್ಲರೂ ಶ್ರಮಪಡಬೇಕು ಈ ನಿಟ್ಟಿನಲ್ಲಿ ನೌಕರರ ಸಂಘಟನೆ ಮತ್ತು ಶಿಕ್ಷಕರ ಸಂಘಗಳು ಮತ್ತು ಶಿಕ್ಷಣ ಇಲಾಖೆಯವರು ಮಾಡುತ್ತಿರುವ ವಿಶೇಷ ದಾಖಲಾತಿ ಅಂದೋಲನವು ತುಂಬಾ ಅನುಕೂಲಕಾರಿ ಎಂದರು. ಕೋವಿಡ್‌ ಸಂದರ್ಭದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು , ಎಲ್ಲರಿಗೂ ಮುಕ್ತ ಶಿಕ್ಷಣ ದೊರೆಯಬೇಕು. ಅದಕ್ಕೆ ಸಾಕಷ್ಟು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಎಲ್ಲಾ ಪೋಷಕರು ಕೋವಿಡ್‌ ಹೊಡೆತದಿಂದ ಹಿಂಜರಿತ ಹೊಂದಿದ್ದಾರೆ ಇಂತಹವರು ಖಾಸಗಿ ಶಾಲೆಗಳ ಶುಲ್ಕ ತುಂಬಲು ಸಾಧ್ಯವಾಗದ ಸಂದರ್ಭದಲ್ಲಿ ಸರ್ಕಾರಿ ಶಾಲೆಗೆ ಎಲ್ಲರೂ ದಾಖಲಾತಿ ಮಾಡಿಸುತ್ತಿದ್ದಾರೆ. ನಮ್ಮ ಸರ್ಕಾರಿ ಶಾಲೆಗಳಲ್ಲಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಶಿಕ್ಷಣ ನೀಡಲಾಗುತ್ತಿದೆ. ದೂರದರ್ಶನ ಮತ್ತು ರೇಡಿಯೊ ಪಾಠಗಳನ್ನು ಪ್ರಸ...

Give the post of district president of the BJP party in the district to a leader from an oppressed community.

Report and photo courtesy of Suresh Pattan, Mo: 98862 958 Chitradurga Feb. 28 BJP's SC, ST unit office bearers and the oppressed community, who were deprived of the post of Chitradurga BJP district president, have urged the state leaders to give the post of BJP district president to any leader from the oppressed community in the district. Speaking at a press conference at the tourist temple in Chitradurga city, BJP General Secretary Sampath Kumar said that the BJP party has grown a lot in the country. It is not only those who are here but also BJP workers . There are BJP workers in every house. Since the birth of the BJP party, it has been organizing. It has been changing the responsibilities of the organization every 3 years. From the party's national president to the presidents of the party's fronts , there are changes. Only some communities in the district are responsible. The exploited communities are not getting responsible positions. The responsibilities of the party...